ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಬದುಕನ್ನೇ ಧಾರೆ ಎರೆದ ಶಿವಮೊಗ್ಗ ಜಿಲ್ಲೆಯ ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಯಿತು.
ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ, ಬಿ.ಎಸ್.ವೈ, ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ, ಆರಗ ಜ್ನಾನೇಂದ್ರ, ಕುಮಾರ್ ಬಂಗಾರಪ್ಪ, ಹರತಾಳು ಹಾಲಪ್ಪ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.
ಸಿಎಂ ಸೂಚನೆಗಳೇನು?
* ಜಂಟಿ ಸಮೀಕ್ಷೆಯ ಆಧಾರದಲ್ಲಿ ಸಂತ್ರಸ್ತರಿಗೆ ವೈಯಕ್ತಿಕ ಪಹಣಿ ದಾಖಲಿಸಲು ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಕ್ರಮ ವಹಿಸಬೇಕು.
* ಪ್ರವಾಸೋದ್ಯಮ ಇಲಾಖೆಯಿಂದ ಪಿಪಿಪಿ ಮಾದರಿಯಲ್ಲಿ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಎನ್ಒಸಿ ನೀಡುವಂತೆ ಕೋರಿದ್ದು. ಶೀಘ್ರವೇ ಕ್ರಮ ವಹಿಸಬೇಕು.
* ಮೈಸೂರು ಕಾಗದ ಕಾರ್ಖಾನೆಯ ಅರಣ್ಯ ಪ್ರದೇಶದಲ್ಲಿ ಬೆಳೆದ ಮರ ಕಡಿತಲೆ ಮಾಡಿ, ಮಾರಾಟ ಮಾಡಬೇಕು. ಅದರಿಂದ ಬರುವ ಹಣದಿಂದ ಸಿಬ್ಬಂದಿಗೆ ವೇತನ ಪಾವತಿಸಬೇಕು.
* ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವುದು ವಿಳಂಬವಾಗಿದೆ. ಡೆಡ್ ಲೈನ್ ಒಳಗೆ ಅಧಿಕಾರಿಗಳು ಕೆಲಸ ಮಾಡಬೇಕು.
* ಶಿಕಾರಿಪುರ, ಸೊರಬ, ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಮುಳುಗಡೆ ಸಂತ್ರಸ್ತರೆAದು ಗುರು ತಿಸಲ್ಪಟ್ಟು ಅಂದಾಜು ೯,೭೭೩ ಎಕರೆಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಭೂ ಹಕ್ಕನ್ನು ದಾಖಲೆ ಕೊಡುವ ನಿಟ್ಟಿನಲ್ಲಿ ಕಂದಾಯ, ಅರಣ್ಯ ಇಲಾಖೆ ಜಂಟಿ ಸಮೀಕ್ಷೆ ಕೈಗೊಳ್ಳಲಿ.