ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಜ್ಯದಲ್ಲಿ ಇನ್ನೂ ಕೋವಿಡ್ ಸೋಂಕಿತರು ಪತ್ತೆಯಾಗುತ್ತಿವುದನ್ನು ಮನಗಂಡು ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅದರನ್ವಯ ಹೊಸ ವರ್ಷ ಆಚರಣೆ ಮತ್ತು ಕ್ರಿಸ್ಮಸ್ ಆಚರಣೆಯ ಬಗ್ಗೆ ಹಲವು ಸೂಚನೆಗಳನ್ನು ನೀಡಿ ಮುಖ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಟಿ.ಎಂ.ವಿಜಯ್ ಭಾಸ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ಕ್ರಿಸ್ಮಸ್ ಮಾರ್ಗಸೂಚಿ
- ಸಾಮೂಹಿಕ ಕೂಟಗಳನ್ನು ಸಾರ್ವಜನಿಕ ಸ್ಥಳ, ಹೆಚ್ಚು ಜನಸಂಖ್ಯೆಯುಳ್ಳ ವಸತಿ ಸಮುಚ್ಚಯ ಹಾಗೂ ಜನ ಸೇರತಕ್ಕಂತಹ ಸ್ಥಳಗಳಲ್ಲಿ ಆಯೋಜಿಸುವುದು ನಿಷೇಧ
- ಚರ್ಚ್ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮೇಲ್ವಿಚಾರಕರು ಮತ್ತು ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸತಕ್ಕದ್ದು.
- ಕ್ರಿಸ್ಮಸ್ ಆಚರಣೆ ಸಂದರ್ಭದಲ್ಲಿ ಕೋವಿಡ್ 19 ಸೋಂಕು ತಡೆಗಟ್ಟಲು ಸಾರ್ವಜನಿಕ ಹಸ್ತಲಾಘವ, ಆಲಿಂಗನವನ್ನು ನಿಷೇಧಿಸಲಾಗಿದೆ.