ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೇಂದ್ರ ಸರ್ಕಾರ 100 ಸ್ಮಾರ್ಟ್ ಸಿಟಿಗಳನ್ನು ಆಯ್ಕೆ ಮಾಡಿತ್ತು. ಅದರಲ್ಲಿ ಏಳು ಕರ್ನಾಟಕ ರಾಜ್ಯದಲ್ಲಿವೆ. ಆದರೆ, ಇನ್ನೂ ಮೂರ್ನಾಲ್ಕು ನಗರಗಳು ಪಟ್ಟಿಯಿಂದ ಬಿಟ್ಟುಹೋಗಿದ್ದು. ಅವುಗಳಿಗೂ ಆದ್ಯತೆ ನೀಡುವಂತೆ ಕೇಂದ್ರ ಮನವಿ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.
ಮಹಾನಗರ ಪಾಲಿಕೆ, ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಆಶ್ರಯದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಿಲಾನ್ಯಾಸ, ಉದ್ಘಾಟನೆ ಸಮಾರಂಭವನ್ನು ಸೋಮವಾರ ನೆರವೇರಿಸಿ ಮಾತನಾಡಿದರು. ಬಳ್ಳಾರಿ, ಕಲಬುರಗಿ ಮತ್ತು ವಿಜಯಪುರ ಪಾಲಿಕೆಗಳನ್ನು ಸ್ಮಾರ್ಟ್ ಸಿಟಿ ಅಡಿ ಆಯ್ಕೆ ಮಾಡುವಂತೆ ಕೇಂದ್ರ ನಗರಾಭಿವೃದ್ಧಿ ಸಚಿವರಿಗೆ ಮನವಿ ಮಾಡಲಾಗಿದೆ. ಬರುವದಿನಗಳಲ್ಲಿ ಈ ಕುರಿತು ಚರ್ಚಿಸಲು ಭೇಟಿ ಮಾಡಲಾಗುವುದು ಎಂದು ಹೇಳಿದರು. ಸಚಿವ ಕೆ.ಎಸ್.ಈಶ್ವರಪ್ಪ, ಡಿ.ಎಸ್.ಅರುಣ್, ಎಸ್.ರುದ್ರೇಗೌಡ, ಎಸ್.ದತ್ತಾತ್ರಿ, ಆರ್.ಪ್ರಸನ್ನ ಕುಮಾರ್, ಮೇಯರ್ ಸುವರ್ಣ ಶಂಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
[ps_audioplayer name=””] |