ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪ್ರತಿನಿತ್ಯ ಏರು ಮುಖದಲ್ಲಿ ಸಾಗಿರುವ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆಯಿಂದ ಜನ ಕಂಗಾಲಾಗಿದ್ದಾರೆ. ಇದನ್ನು ವಿರೋಧಿಸಿ ನಗರದ ಶಿವಪ್ಪ ನಾಯಕ ಪ್ರತಿಮೆ ಬಳಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶನಿವಾರ ಮಾಡಲಾಯಿತು.
ಇದನ್ನೂ ಓದಿ | ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆ ಅಡಿ ಅಡಕೆ ಸೇರಿಸಿ, ಕಾರಣವೇಣು ಗೊತ್ತಾ?
ಸಿಲಿಂಡರ್ಗೆ ಹೂವಿನ ಹಾರ ಹಾಕಿ ಪಕ್ಕದಲ್ಲಿ ಸೌದೆ ಹಚ್ಚಿ ಹಪ್ಪಳ ಕರಿದು ಬೋಂಡಾ ಮಾಡುವ ಮೂಲಕ ಕಾಂಗ್ರೆಸ್ ಮುಖಂಡರು ವಿನೂತನವಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು.
ಒಂದೆಡೆ ದೇಶದಲ್ಲಿ ಕೊರೊನಾ ಕಂಟ್ರೋಲ್ ನಲ್ಲಿದೆ ಎಂದು ವರದಿ ಬಿಡುಗಡೆ ಮಾಡುತ್ತಿರುವ ಸರ್ಕಾರ ಮತ್ತೊಂದೆಡೆ ಎರಡನೇ ಅಲೆಯ ಬಗ್ಗೆ ಭೀತಿ ಹುಟ್ಟಿಸುತ್ತಿದೆ. ಇದರೊಂದಿಗೆ ದಿನ ಬಳಕೆ ವಸ್ತುಗಳ ಬೆಲೆ ದಿನೇ ದಿನೆ ಹೆಚ್ಚುತ್ತಿದೆ. ಇವುಗಳ ಮೇಲೆ ಅಂಕುಶ ಹಾಕುವಲ್ಲಿ ಸರ್ಕಾರ ವಿಫಲವಾಗಿದೆ.
– ಎಚ್.ಎಸ್.ಸುಂದರೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ
ಅಡುಗೆ ಅನಿಲದ ಬೆಲೆ ದಿಢೀರ್ 50 ರೂಪಾಯಿ ಏರಿP ಕಂಡಿದೆ. ಒಂದೇ ವಾರದಲ್ಲಿ 2 ಸಲ ದರ ಹೆಚ್ಚಿದೆ. ಇತ್ತ ಸಿಲಿಂಡರ್ ಗೆ ನೀಡುತ್ತಿದ್ದ ಸಬ್ಸಿಡಿ ಕೂಡ ನಿಲ್ಲಿಸಲಾಗಿದೆ. ತೈಲ ಬೆಲೆ ಏರಿಕೆಯೊಂದಿಗೆ ಅಡುಗೆ ಎಣ್ಣೆ, ಬೇಳೆ ಕಾಳು, ತರಕಾರಿ ಬೆಲೆಯಲ್ಲೂ ಏರಿಕೆಯಾಗಿದೆ ಎಂದು ಆರೋಪಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲಿಕೆ ಸದಸ್ಯರಾದ ಎಚ್.ಸಿ.ಯೋಗೇಶ್, ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ, ಮುಖಂಡರಾದ ಇಸ್ಮಾಯಿಲ್ ಖಾನ್, ಎಲ್.ರಾಮೇಗೌಡ, ಎಸ್.ಪಿ.ಶೇಷಾದ್ರಿ, ಎನ್.ರಮೇಶ್, ವೈ.ಎಚ್. ನಾಗರಾಜ್, ವಿಶ್ವನಾಥ ಕಾಶಿ, ವಿಜಯಲಕ್ಷ್ಮಿ ಪಾಟೀಲ್, ಸಿ.ಎಸ್.ಚಂದ್ರಭೂಪಾಲ್, ಎನ್.ಡಿ.ಪ್ರವೀಣ್ ಕುಮಾರ್, ಚಂದನ್, ಸೌಗಂದಿಕ, ಎಚ್.ಪಿ.ಗಿರೀಶ್ ಪಾಲ್ಗೊಂಡಿದ್ದರು.