ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಪರವಾನಗಿ ಹೊಂದಿರುವ ಕ್ವಾರಿಗಳ ಸಮಗ್ರ ಸ್ಥಿತಿಗತಿ ಪರಿಶೀಲನೆಗೆ ಹಾಗೂ ಅಕ್ರಮ ಗಣಿಗಾರಿಕೆಯನ್ನು ಪರಿಶೀಲಿಸಲು ಡ್ರೋನ್ ಮೂಲಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಇದನ್ನೂ ಓದಿ | ಕೆಜಿಎಫ್ ಚಾಪ್ಟರ್ 2, ಯುವರತ್ನ ಉಚಿತವಾಗಿ ನೋಡುವ ಸುವರ್ಣಾವಕಾಶ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಕ್ವಾರಿ, ಕ್ರಷರ್ ಮತ್ತು ಮರಳು ಸಾಗಾಣಿಕೆ ಜಿಲ್ಲಾ ಸಮಿತಿ ಸಭೆಯಲ್ಲಿ ಈ ಕುರಿತು ಪರಿಶೀಲನೆ ನಡೆಸಿ ಮಾತನಾಡಿದರು.
ಪರವಾನಗಿ ಪಡೆದವರು ನಿಯಮಾವಳಿ ಉಲ್ಲಂಘಿಸದೆ ಗಣಿಗಾರಿಕೆ ಮತ್ತು ಸಾಗಾಟ ನಡೆಸಬೇಕು. ಇದಕ್ಕೆ ಸಂಬಂಧಿಸಿದ ಎಲ್ಲ ಇಲಾಖೆಗಳು ಸಮನ್ವಯದಿಂದ ಗಣಿಗಾರಿಕೆ ಮೇಲೆ ನಿಗಾ ವಹಿಸಬೇಕು. ಸ್ಥಳ ತಪಾಸಣೆ ಸಂದರ್ಭದಲ್ಲಿ ಸಬ್ ಇನ್ ಸ್ಪೆಕ್ಟರ್ ಮಟ್ಟದ ಅಧಿಕಾರಿ ಸಹ ಉಪಸ್ಥಿತರಿರಬೇಕು ಎಂದರು.
ಗಣಿಗಾರಿಕೆ ಸ್ಥಗಿತಗೊಳಿಸಿಲ್ಲ | ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಚಟುವಟಿಕೆಗಳನ್ನು ಸ್ಥಗಿತಗೊಳಿಸಿಲ್ಲ. ನಿಯಮಾವಳಿ ಪ್ರಕಾರ ಪರವಾನಗಿ ಪಡೆದು ಗಣಿಗಾರಿಕೆ ಮತ್ತು ಖನಿಜ ಸಾಗಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಬಿ.ಶಾಂತರಾಜು, ಜಿಲ್ಲಾ ಪಂಚಾಯಿಯಿ ಸಿಇಒ ಎಂ.ಎಲ್.ವೈಶಾಲಿ, ಉಪವಿಭಾಗಾಧಿಕಾರಿ ಟಿ.ವಿ. ಪ್ರಕಾಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
https://www.suddikanaja.com/2021/03/05/no-need-to-visit-rto-office-for-these-18-services/