ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಮಾರ್ಚ್ 27ರಂದು ನರೇಂದ್ರ ಮೋದಿ ವಿಚಾರ ಮಂಚ್ ಕಾರ್ಯಕ್ರಮ ನಡೆಸಲು ಅನುಮತಿ ನೀಡಿದ್ದಕ್ಕೆ ಎನ್.ಎಸ್.ಯು.ಐ ವಿರೋಧ ವ್ಯಕ್ತಪಡಿಸಿದೆ.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
ಈ ಸಂಬಂಧ ನೆಹರೂ ಕ್ರೀಡಾಂಗಣದ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದ ಎನ್.ಎಸ್.ಯು.ಐ ಪದಾಧಿಕಾರಿಗಳು, ಚಕ್ರವರ್ತಿ ಸೂಲಿಬೆಲೆ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೊಂದು ರಾಜಕೀಯ ಕಾರ್ಯಕ್ರಮವಾಗಿದ್ದು, ಇದಕ್ಕೆ ಅನುಮತಿ ನೀಡಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ವಿರೋಧಕ್ಕೆ ಕಾರಣ | ಇತ್ತೀಚೆಗೆ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಬೇಕಿದ್ದ ರೈತ ಪಂಚಾಯತ್ ಗೆ ಅವಕಾಶ ನೀಡಿರಲಿಲ್ಲ. ಆದ್ದರಿಂದ, ಸೈನ್ಸ್ ಮೈದಾನದಲ್ಲಿ ಸದರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಆಗ
ಕ್ರೀಡಾ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಾಗಿ ಇಲಾಖೆ ಸ್ಪಷ್ಟೀಕರಣ ನೀಡಿತ್ತು. ಈಗ ನರೇಂದ್ರ ಮೋದಿ ವಿಚಾರ ಮಂಚ್ ನಿಂದ ಆಯೋಜಿಸಿರುವ ರಾಜಕೀಯ ಪ್ರೇರಿತ ಭಾಷಣದ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ತಾರತಮ್ಯ ಮಾಡುತ್ತಿರುವುದು ಸರಿಯಲ್ಲ. ಚಕ್ರವರ್ತಿ ಸೂಲಿಬೆಲೆ ಅವರ ರಾಜಕೀಯ ಪ್ರೇರಿತ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.
ಸೂಲಿಬೆಲೆ ಯುವಪೀಳಿಗೆ ದಾರಿ ತಪ್ಪಿಸುತ್ತಿದ್ದಾರೆ | ಸೂಲಿಬೆಲೆ ಅವರು ಭಾಷಣದಲ್ಲಿ ಸುಳ್ಳುಗಳನ್ನು ಹೇಳುವ ಮೂಲಕ ಯುವಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾರೆ. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್, ಡೀಸೆಲ್ ದರ ಕಡಿಮೆ ಆಗುತ್ತದೆ. ಯುವಜನರಿಗೆ ಉದ್ಯೋಗ ಸಿಗುತ್ತದೆ. ದೇಶ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತದೆ ಎಂದೆಲ್ಲ ಹೇಳಿದ್ದರು. ಆದರೆ, ಅದ್ಯಾವುದೂ ನಡೆದಿಲ್ಲ. ಇಂತಹ ಸುಳ್ಳು ಭಾಷಣ ಮಾಡುವವರ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಎಚ್.ಎಸ್.ಬಾಲಾಜಿ, ಕಾರ್ಯಾಧ್ಯಕ್ಷ ರವಿಕುಮಾರ್, ನಗರಾಧ್ಯಕ್ಷ ವಿಜಯ್, ರವಿಕುಮಾರ್, ಆಲ್ವಿನ್, ಮನೋಜ್, ಪುರಲೆ ಮಂಜು, ಗಣೇಶ್, ಗಿರೀಶ್, ವಿನಯ್, ಶಿವು ಭಾಗವಹಿಸಿದ್ದರು.