ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಜ್ಞರು ಅಕ್ಟೋಬರ್ ತಿಂಗಳಲ್ಲಿ ಕೋವಿಡ್ ಮೂರನೇ ಅಲೆ ಬರುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ, ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
https://www.suddikanaja.com/2020/12/19/road-transport-and-highways-minister-nitin-gadkari-inaugurated-689-crore-project-in-shivamogga/
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಮುಂಜಾಗರೂಕತಾ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ಲಸಿಕೆಯೇ ಏಕೈಕ ಮಾರ್ಗ | ಜಿಲ್ಲಾ ಕೋವಿಡ್ ನಿರ್ವಹಣಾ ತಜ್ಞ ಸಮಿತಿಯ ಸದಸ್ಯ ಡಾ.ಶ್ರೀಕಾಂತ್ ಹೆಗಡೆ ಮಾತನಾಡಿ, ಮೂರನೇ ಅಲೆಯನ್ನು ತಡೆಯಲು ಲಸಿಕೆ ನೀಡುವುದನ್ನು ತೀವ್ರಗೊಳಿಸುವುದು ಮಾತ್ರ ಏಕೈಕ ಮಾರ್ಗವಾಗಿದೆ ಎಂದರು.
READ | ನಾಳೆಯಿಂದ ಶಿವಮೊಗ್ಗದಲ್ಲಿ ಮತ್ತೆ ಕಂಪ್ಲೀಟ್ ಲಾಕ್ ಡೌನ್, ಎಷ್ಟು ದಿನ ಬಂದ್ ಇರಲಿದೆ, ಏನೇನು ಲಭ್ಯ?
ಮೂರನೇ ಅಲೆ ತಾಲೂಕು ಹಾಗೂ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿದ್ದು, ಅಲ್ಲಿ ವೈದ್ಯಕೀಯ ವ್ಯವಸ್ಥೆಯನ್ನು ಉತ್ತಮಪಡಿಸಬೇಕು. ಅಗತ್ಯ ಪ್ರಮಾಣದ ವೈದ್ಯರು, ನರ್ಸ್, ಸಿಬ್ಬಂದಿಗಳನ್ನು ನೇಮಕ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಲಸಿಕೆ ನೀಡುವ ಕಾರ್ಯವನ್ನು ತೀವ್ರಗೊಳಿಸಬೇಕು ಎಂದು ಹೇಳಿದರು.
ಇನ್ನೋರ್ವ ಸದಸ್ಯ ಧನಂಜಯ್ ಸರ್ಜಿ ಅವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ಆದಷ್ಟು ಬೇಗನೆ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಬಿಗಿಗೊಳಿಸಬೇಕು ಎಂದರು.
ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಕುಮಾರ ಬಂಗಾರಪ್ಪ, ಪ್ರಸನ್ನ ಕುಮಾರ್, ರುದ್ರೇಗೌಡ, ಎಸ್ಪಿ ಲಕ್ಷ್ಮೀ ಪ್ರಸಾದ್, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
https://www.suddikanaja.com/2021/02/13/applicatiom-called-for-bala-gaurava-award/