ಸುದ್ದಿ ಕಣಜ.ಕಾಂ
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಹಂತದ ಲಾಕ್ ಡೌನ್ ಗೆ ರಾಜ್ಯ ಸರ್ಕಾರ ಮುಂದಾಗಿದೆ. ಮೇ 24ಕ್ಕೆ ಪೂರ್ಣಗೊಳ್ಳಬೇಕಿದ್ದ ಲಾಕ್ ಡೌನ್ ಅನ್ನು ಜೂನ್ 7ರ ವರೆಗೆ ವಿಸ್ತರಣೆ ಮಾಡಲಾಗಿದೆ.
https://www.suddikanaja.com/2021/05/09/no-vehicles-allowed-tomorrow/
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸದಂತೆ ತಿಳಿಸಿದ್ದಾರೆ. ರಾಜ್ಯದಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳು ಮುಂದುವರಿಯಲಿದ್ದು, ಮುಂಚೆಯಂತೆಯೇ ಮಾರ್ಗಸೂಚಿ ಮುಂದುವರಿಯಲಿದೆ. ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಆದರೆ, 10 ಗಂಟೆಯವರೆಗೆ ಕಾಲಾವಕಾಶ ಇದೆ ಎಂಬ ಕಾರಣಕ್ಕೆ 10.30 ಆದರೂ ಜನ ಓಡಾಡುವುದು ಗಮನಕ್ಕೆ ಬಂದಿದೆ. ಹೀಗಾಗಿ, ಹೊರಗಡೆ ಹೋದವರು 9.45ರ ಹೊತ್ತಿಗೆ ಮನೆ ಸೇರಬೇಕು. ಇಲ್ಲದಿದ್ದರೆ, ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ತಿಳಿಸಿದ್ದಾರೆ.
ಮೇ 24 ರಿಂದ ಜೂನ್ 7ರ ಬೆಳಗ್ಗೆ 6 ಗಂಟೆವರೆಗೆ ನಿರ್ಬಂಧ ಜಾರಿಯಲ್ಲಿರಲಿದೆ ಎಂದು ಹೇಳಿದ್ದಾರೆ.
ಬೆಳಗ್ಗೆ 6ರಿಂದ 10 ಗಂಟೆಯ ರಿಲ್ಯಾಕ್ಸ್ ಅವಧಿಯಲ್ಲಿ ಜನರು ಅಗತ್ಯ ವಸ್ತುಗಳ ಖರೀದಿಗೆ ಹೊರಬರಲು ಕಾಲ್ನಡಿಗೆಯಲ್ಲೇ ಬರತಕ್ಕದ್ದು. ವಾಹನಗಳನ್ನು ತರುವಂತಿಲ್ಲ.
https://www.suddikanaja.com/2021/05/01/relaxation-in-timing/