ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕುಡಿಯುವ ನೀರಿನಲ್ಲಿನ ದೋಷಗಳಿಂದಾಗಿ ಫಂಗಸ್ ಹರಡಿರುವ ಸಂಭವವಿದೆ ಎಂದು ತಜ್ಞರು ವರದಿ ನೀಡಿರುವ ಹಿನ್ನೆಲೆಯಲ್ಲಿ ನೀರನ್ನು ಕಾಯಿಸಿ ಆರಿಸಿ ಕುಡಿಯುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸೂಚಿಸಿದರು.
https://www.suddikanaja.com/2021/04/18/adondittu-kala-movie-shooting-in-thirthahalli/
ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅವರು, ನಗರಗಳಿಂದ ಬಹುಸಂಖ್ಯಾತರು ಗ್ರಾಮೀಣ ಪ್ರದೇಶಗಳಿಗೆ ಹಿಂದಿರುಗುತ್ತಿದ್ದಾರೆ. ಅಂತಹ ವ್ಯಕ್ತಿಗಳ ಮೇಲೆ ನಿಗಾ ಇಡಬೇಕಾದ ಅಗತ್ಯವಿದೆ ಎಂದರು.
ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.
ಅನುದಾನ ಬಳಕೆಗೆ ಸಡಿಲೀಕರಣ | ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕಾಗಿ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯದ ತುರ್ತು ಕಾಮಗಾರಿಗಳಿಗೆ ವ್ಯಯ ಮಾಡಲಾಗುವ ಹಣವನ್ನು 15ನೇ ಹಣಕಾಸಿನ ಅನುದಾನದಲ್ಲಿ ಬಳಸಿಕೊಳ್ಳಲು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಂಚಾಯಿತಿಗಳಿಗೆ ಅನುಮತಿ ನೀಡಲಾಗಿದೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು.
ಈ ಹಿಂದೆ ಅನುದಾನವನ್ನು ಬಳಸಿಕೊಳ್ಳಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅನುಮೋದನೆ ಪಡೆಯಬೇಕಾಗಿತ್ತು. ಪ್ರಸ್ತುತ ಸಂದರ್ಭದಲ್ಲಿ ಈ ನಿಯಮವನ್ನು ಸಡಿಲಿಸಲಾಗಿದೆ ಎಂದರು.
ವಿಡಿಯೋ ಸಂವಾದದಲ್ಲಿ ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳ ವ್ಯಾಪ್ತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಪಿಡಿಒಗಳು ಭಾಗವಹಿಸಿದ್ದರು.
https://www.suddikanaja.com/2020/12/10/mp-by-raghavendra-meeting-in-bangalore-about-shettihalli-and-kodachadri/