ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾ ಮಹಾಮಾರಿಯಿಂದ ಮೃತಪಡುವವರ ಸಂಖ್ಯೆಯಲ್ಲೂ ಶುಕ್ರವಾರ ಇಳಿಕೆಯಾಗಿದೆ.
https://www.suddikanaja.com/2021/02/05/wild-elephant-combing-at-umblebailu-end-today/
ನಿತ್ಯ ಸರಾಸರಿ 3-4 ಜನರನ್ನು ಬಲಿ ಪಡೆಯುತ್ತಿದ್ದ ಸೋಂಕು ತನ್ನ ಆರ್ಭಟವನ್ನು ಕಡಿಮೆ ಮಾಡಿದೆ.
ಜಿಲ್ಲಾಡಳಿತ ಶುಕ್ರವಾರ ಬಿಡುಗಡೆ ಮಾಡಿರುವ ವರದಿ ಪ್ರಕಾರ, ಜಿಲ್ಲೆಯಲ್ಲಿ 97 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 84 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.
ಸೋಂಕಿತರ ಸಂಪರ್ಕದಲ್ಲಿದ್ದ ಹಾಗೂ ರೋಗದ ಲಕ್ಷಣಗಳನ್ನು ಹೊಂದಿರುವ 4,048 ಜನರ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಹಳೆಯದ್ದೂ ಸೇರಿ ಒಟ್ಟು 5,745 ವರದಿಗಳು ನೆಗೆಟಿವ್ ಇರುವುದು ದೃಢಪಟ್ಟಿದೆ.
ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ 133 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದಂತೆ, ಡಿಸಿಎಚ್ಸಿ 73, ಕೋವಿಡ್ ಕೇರ್ ಸೆಂಟರ್ ನಲ್ಲಿ 116, ಖಾಸಗಿ ಆಸ್ಪತ್ರೆಯಲ್ಲಿ 79, ಹೋಮ್ ಐಸೋಲೇಷನ್ ನಲ್ಲಿ 326 ಹಾಗೂ ಟ್ರಿಯೇಜ್ ಕೇಂದ್ರದಲ್ಲಿ 58 ಸೋಂಕಿತರಿದ್ದಾರೆ.
ತಾಲೂಕುವಾರು ವರದಿ | ಶಿವಮೊಗ್ಗದಲ್ಲಿ 38, ಭದ್ರಾವತಿ 8, ಶಿಕಾರಿಪುರ 3, ತೀರ್ಥಹಳ್ಳಿ 21, ಸೊರಬ 5, ಹೊಸನಗರ 10, ಸಾಗರ 6, ಬಾಹ್ಯ ಜಿಲ್ಲೆಯ 6 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.
https://www.suddikanaja.com/2021/07/10/covid-relief-in-shivamogga/