ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ನವುಲೆ ಬಳಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೇಬು ಹಣ್ಣಿನ ಹಾರ ಹಾಕಿ ಭರ್ಜರಿ ಸ್ವಾಗತ ಕೋರಲಾಗಿದೆ.
ಶಿಕಾರಿಪುರದ ಲಂಬಾಣಿ ಸಮುದಾಯದ ಸಭೆ ಮುಗಿಸಿ ಕಾರಿನಲ್ಲಿ ಶಿವಮೊಗ್ಗ ನಗರಕ್ಕೆ ಗುರುವಾರ ರಾತ್ರಿ ಆಗಮಿಸಿದ ಡಿಕೆಶಿಗೆ ಹೂವಿನ ಮಳೆಗೆರೆದು ಕಾರ್ಯಕರ್ತರು ಸ್ವಾಗತಿಸಿದರು. ಡಿಕೆಶಿ ಪರ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.