ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಬೆಕ್ಕಿನಕಲ್ಮಠದಲ್ಲಿ ಮಲೆನಾಡು ವೀರಶೈವ ಮಠಾದೀಶರ ಪರಿಷತ್ತಿನಿಂದ ಬುಧವಾರ ವಿಶೇಷ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಭಾಗವಹಿಸಿದ್ದ 21 ಮಠಾಧೀಶರು ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಿಂದ ಕೆಳಗಿಳಿಸಬಾರದು ಎಂದು ಆಗ್ರಹಿಸಲಾಗಿದೆ.
https://www.suddikanaja.com/2021/07/14/swamiji-prophesied-about-state-politics/
ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಠಾಧೀಶರ ಪರಿಷತ್ ಅಧ್ಯಕ್ಷ, ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ, ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಗಟ್ಟಿಯಾಗಿ ನೆಲೆಯೂರಲು ಪ್ರಯತ್ನಿಸಿದ್ದಾರೆ ಎಂದು ಹೇಳಿದರು.
ಶಿವಮೊಗ್ಗ ಜಿಲ್ಲೆಯಲ್ಲಂತೂ ಅವರು ಡಿಸಿಎಂ ಆದಾಗಿನಿಂದಲೇ ಅಭಿವೃದ್ಧಿಯ ಶಕೆ ಆರಂಭವಾಗಿದೆ. ಅವರ ಬದ್ಧತೆಯ ಫಲವಾಗಿ ಶಿವಮೊಗ್ಗ ಶೈಕ್ಷಣಿಕ, ಔದ್ಯೋಗಿಕ, ಪ್ರವಾಸೋದ್ಯಮ ಸೇರಿದಂತೆ ಸರ್ವತೋಮುಖ ಅಭಿವೃದ್ಧಿ ಕಂಡಿದೆ ಎಂದರು.
ವಯಸ್ಸಿನ ಕಾರಣ ಹೇಳಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಅವೈಜ್ಞಾನಿಕ. ಈಗಲೂ ಅವರಲ್ಲಿ ಅಭಿವೃದ್ಧಿಯ ತುಡಿತವಿದೆ. ಅದನ್ನು ಹೈಕಮಾಂಡ್ ಪರಿಗಣಿಸಬೇಕು. ಈ ಅವಧಿ ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
https://www.suddikanaja.com/2021/03/09/fir-on-bhadravathi-mla-veerashaiva-samaja-condemn/
ಮಾಧ್ಯಮಗೋಷ್ಠಿಯಲ್ಲಿ ತೊಗರ್ಸಿ ಪಂಚವಣ್ಣಿಗೆ ಮಠದ ಶ್ರೀ ಚನ್ನವೀರದೇಶಿ ಕೇಂದ್ರ ಸ್ವಾಮೀಜಿ, ಬಳ್ಳಿಗಾವಿಯ ಗೇರುಕೊಪ್ಪ ಮಠದ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮೀಜಿ, ಕಕೇನಂದಿಹಳ್ಳಿಯ ದುಗ್ಲಿ ಮಠದ ಶ್ರೀ ರೇವಣ್ಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಜಡೆ ಮಠದ ಶ್ರೀ ಡಾ.ಮಹಾಂತ ಸ್ವಾಮೀಜಿ, ಶಿರಾಳಕೊಪ್ಪದ ವಿರಕ್ತ ಮಠದ ಶ್ರೀ ಸಿದ್ದೇಶ್ವರ ಸ್ವಾಮೀಜಿ, ತಾಳಗುಪ್ಪದ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ, ಮೂಡಿ ಮಠದ ಶ್ರೀ ಸದಾಶಿವಸ್ವಾಮೀಜಿ, ಹಿರೇಮಾಗಡಿ ಮಠದ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ, ತೊಗರ್ಸಿಯ ತ್ಯಾತನೂರು ಹಿರೇಮಠದ ಶ್ರೀ ಗುರುಬಸವ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕೋಣಂದೂರು ಮಠದ ಶ್ರೀ ಪಂಡಿತಾರಾಧ್ಯ ಶಿವಚಾರ್ಯ ಸ್ವಾಮೀಜಿ, ಶಾಂತಪುರದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ತೊಗರ್ಸಿಯ ಶ್ರೀ ಮಹಾಂತ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಲಕ್ಕೊಳ್ಳಿ ಸ್ವಪ್ತ ಶ್ರೀ ವೃಷಭ ಸೇನಭತ್ಯಾರಕ ಸ್ವಾಮೀಜಿ, ಹಾರನಹಳ್ಳಿಯ ರಾ.ಲಿಂಗೇಶ್ವರ ಮಠದ ಶ್ರೀ ವಿಶ್ವರಾಧ್ಯ ಶಿವಾಚಾರ್ಯ ಸ್ವಾಮೀಜಿ, ಜಡೆ ಹಿರೇಮಠದ ಶ್ರೀ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ, ಹಾರನಹಳ್ಳಿ ಚೌಕಿಮಠದ ಶ್ರೀ ನೀಲಕಂಠ ಸ್ವಾಮೀಜಿ, ಅರಕೆರೆಯ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿ, ಬಸವಕೇಂದ್ರದ ಶ್ರೀ ಬಸವಮರುಳ ಸಿದ್ದ ಸ್ವಾಮೀಜಿ, ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ ಉಪಸ್ಥಿತರರಿದ್ದರು.
https://www.suddikanaja.com/2021/05/20/covid-care-center-open-in-shubha-mangala/