ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ವಿವಿಧ ಮೊಬೈಲ್ ಕಂಪೆನಿಗಳಿಂದ ಹಾಗೂ ಬಿ.ಎಸ್.ಎನ್.ಎಲ್. ಸಂಸ್ಥೆಯಿಂದ ಆಗಿರಬಹುದಾದ ಟವರ್ ನಿರ್ಮಾಣ ಮತ್ತು ತರಂಗಾಂತರಗಳ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಇಲ್ಲಿ ಮಲೆನಾಡಿನ ನೆಟ್ವರ್ಕ್ ಸಮಸ್ಯೆಯ ಕುರಿತು ಮಹತ್ವದ ಚರ್ಚೆಗಳು ನಡೆದವು.
https://www.suddikanaja.com/2021/02/13/solution-to-internet-problems-set-up-broadband-committee/
ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದೇನು?
ಶಿವಮೊಗ್ಗ ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮವಾದ ಇಂಟರ್ ನೆಟ್ ಹಾಗೂ ಮೊಬೈಲ್ ಸೇವೆಯನ್ನು ಒದಗಿಸಲು ಅಗತ್ಯವಿರುವ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಮೂಲಸೌಲಭ್ಯಗಳನ್ನು ಕೂಡಲೇ ಕಲ್ಪಿಸಿ | ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಿ.ಎಸ್.ಎನ್.ಎಲ್. ಸಂಪರ್ಕವಿರುವ ಅನೇಕ ಕಡೆಗಳಲ್ಲಿ ವಿದ್ಯುತ್, ಜನರೇಟರ್, ನಿರ್ವಹಣೆ ಸಿಬ್ಬಂದಿ ಕೊರತೆ ಮುಂತಾದ ಕಾರಣಗಳಿಂದಾಗಿ ಉತ್ತಮ ಸೇವೆ ನಿರೀಕ್ಷಿಸುವುದು ಸಾಧ್ಯವಾಗುತ್ತಿದೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಕೂಡಲೇ ಉತ್ತಮ ಸೇವೆ ನೀಡಲು ಕ್ರಮ ವಹಿಸುವಂತೆ ವಿಭಾಗೀಯ ವ್ಯವಸ್ಥಾಪಕ ವೆಂಕಟೇಶ್ ಅವರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಟವರ್ ಗಳನ್ನು ನಿರ್ಮಿಸುವ ಸಂಬಂಧ ಖಾಸಗಿ ಕಂಪನಿಗಳಿಗೆ ಪ್ರದೇಶಗಳನ್ನು ವಿಂಗಡಿಸಿ ಹಂಚಿಕೆ ಮಾಡಲಾಗಿದೆ. ಇದರಿಂದಾಗಿ ಶೇ.80ರಷ್ಟು ಪ್ರದೇಶಕ್ಕೆ ಇಂಟರ್ನೆಟ್ ಸಂಪರ್ಕ ಕಲ್ಪಿಸಲು ಸಾಧ್ಯವಾಗಿದೆ. ಉಳಿದ ಶೇ.20ರಷ್ಟು ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲು ಸಂಬಂಧಿಸಿದವರಿಗೆ ಒತ್ತಾಯಿಸಲಾಗುವುದು ಎಂದರು.
READ | ಮಲೆನಾಡಿನ ಒಂಟಿ ಮನೆಗಳ ಮೇಲೆ ಮತ್ತೆ ಟಾರ್ಗೆಟ್, ಹಾಡಹಗಲೇ ದರೋಡೆ, ಮಹಿಳೆಯನ್ನು ಥಳಿಸಿ ಹಣ ಲೂಟಿ
ಆರ್.ಆರ್.ಎಚ್.ಎಂ. ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿನ ಅಂಚೆ ಕಚೇರಿಗಳು, ಆರೋಗ್ಯ ಕೇಂದ್ರಗಳು, ಗ್ರಾಮ ಪಂಚಾಯಿತಿ, ಶಾಲಾ-ಕಾಲೇಜುಗಳು ಸೇರಿದಂತೆ 1000ಕ್ಕೂ ಹೆಚ್ಚಿನ ಭಾಗದಲ್ಲಿ ಉಚಿತ ಸಂಪರ್ಕ ಸೇವೆ ನೀಡಲಾಗುತ್ತಿದೆ. ನಿಗದಿತ ಪ್ರದೇಶದಿಂದ ದೂರದ ಪ್ರದೇಶಕ್ಕೆ ಅದು ಹೊಂದಿರುವ ಕಿ.ಮೀ.ಗಳ ಅಂತರದಲ್ಲಿ ಶುಲ್ಕ ನಿಗದಿಪಡಿಸಿ, ಸಂಪರ್ಕ ಕಲ್ಪಿಸಲು ಕ್ರಮವಹಿಸಲಾಗಿದೆ. ಮಕ್ಕಳ ಆನ್ಲೈನ್ ಕ್ಲಾಸ್ಗಳಿಗೆ ಅಡಚಣೆಯಾಗದಂತೆ ಅಗತ್ಯ ಸಾಮರ್ಥ್ಯ ಇರುವ ಸೇವೆಯನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹೇಳಿದ್ದೇನು?
ಕೋವಿಡ್ ಸೋಂಕಿನ ಕಾರಣದಿಂದಾಗಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವಕರು ವರ್ಕ್ ಫ್ರಮ್ ಹೋಮ್ ಕಾರಣದಿಂದಾಗಿ ಮನೆಯಲ್ಲಿಯೇ ಇದ್ದು ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಉದ್ಯೋಗಿಗಳಿಗೆ ಬಹು ಅಗತ್ಯವಾಗಿರುವ ಇಂಟರ್ ನೆಟ್ ಸೌಲಭ್ಯಕ್ಕಾಗಿ ಮನೆ ಏರಿ, ಮರವೇರಿ ಕುಳಿತುಕೊಳ್ಳುತ್ತಿದ್ದಾರೆ. ತೀರ್ಥಹಳ್ಳಿ, ಸಾಗರ, ಹೊಸನಗರ ಸೇರಿದಂತೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಹೆಚ್ಚಿನ ಸಮಸ್ಯೆ ಇರುವುದನ್ನು ಗುರುತಿಸಲಾಗಿದೆ. ಈ ವ್ಯವಸ್ಥೆ ಜನಸಾಮಾನ್ಯರಿಗೆ ತೀವ್ರ ಅಡಚಣೆ ಉಂಟಾಗಿದೆ ಎಂದರು.
ಸಭೆಯಲ್ಲಿ ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
https://www.suddikanaja.com/2021/01/13/pro-rata-on-drinking-water-line-in-shivamogga-hc-yogesh-opposed/