ಸುದ್ದಿ ಕಣಜ.ಕಾಂ
ಸೊರಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಮನೆಯ ಪಕ್ಕದ ಗೋದಾಮಿನಲ್ಲಿ ಸಂಗ್ರಹಿಸಿಟ್ಟದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಒಣ ಶುಂಠಿ, ಭತ್ತ ಹಾಗೂ ನಾಟ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
VIDEO REPORT | ಕನಸಿನ ಮನೆ ನಿರ್ಮಾಣಕ್ಕೂ ಮುನ್ನವೇ ನಾಟಾ ಭಸ್ಮ ⇓
ತಾಲ್ಲೂಕಿನ ಆಗಸನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದ್ವಾರಹಳ್ಳಿಯಲ್ಲಿ ಶನಿವಾರ ತಡರಾತ್ರಿ ನಡೆದಿರುವ ಅಗ್ನಿ ಅವಘಡದಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ.
ನೆರವಿಗೆ ಧಾವಿಸಿದ ಸ್ಥಳೀಯರು, ಅಗ್ನಿಶಾಮಕ ದಳದಿಂದ 5 ಗಂಟೆ ಕಾರ್ಯಾಚರಣೆ
ದ್ವಾರಹಳ್ಳಿ ಗ್ರಾಮದ ವಕೀಲ ಶಿವಪ್ಪ ಅವರ ಮನೆಯ ಪಕ್ಕದಲ್ಲಿ ದಾಸ್ತಾನು ಇರಿಸಿದ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಶಬ್ದ ಬರುವುದನ್ನು ಕೇಳಿ ಕುಟುಂಬದವರು ದಿಕ್ಕು ತೋಚದೇ ಕೂಗಿದ್ದಾರೆ. ಸ್ಥಳೀಯರ ನೆರವಿನೊಂದಿಗೆ ಹಾನಗಲ್ ಮತ್ತು ಸೊರಬ ಅಗ್ನಿ ಶಾಮಕ ಸಿಬ್ಬಂದಿ ಸತತ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿದ್ದು, ನೆರೆಯ 5 ಮನೆಗಳಿಗೆ ಬೆಂಕಿ ಆವರಿಸುವುದನ್ನು ಸಹ ತಪ್ಪಿಸಿದ್ದಾರೆ.
ಅಂದಾಜು 10 ಲಕ್ಷ ರೂ. ಮೌಲ್ಯದ ನಷ್ಟ
ಅಂದಾಜು 10 ಲಕ್ಷ ರೂಪಾಯಿ ಮೌಲ್ಯದ ಒಣ ಶುಂಠಿ, ಸುಮಾರು 100 ಅಡಿ ತೇಗ ಮತ್ತು ಹೊನ್ನೆ ನಾಟ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿವೆ.
ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಯಲ್ಲಪ್ಪ ಸ್ಥಳಕ್ಕೆ ತರಳಿ ವರದಿ ಸಲ್ಲಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಜೆಡಿಎಸ್ ಆನವಟ್ಟಿ ಬ್ಲಾಕ್ ಅಧ್ಯಕ್ಷ ಬಾಸೂರು ಚಂದ್ರೇಗೌಡ ಸೇರಿದಂತೆ ಮತ್ತಿತರರು ಭೇಟಿ ನೀಡಿದ್ದು, ನಷ್ಟಕ್ಕೆ ಒಳಗಾದ ಶಿವಪ್ಪ ಅವರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಒತ್ತಾಯಿಸಿದ್ದಾರೆ.
https://www.suddikanaja.com/2020/11/16/acchari-short-movie/