ಸುದ್ದಿ ಕಣಜ.ಕಾಂ | DISTRICT | GANESH FESTIVAL
ಶಿವಮೊಗ್ಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ಕಾಳಜಿಯ ಬಗ್ಗೆ ಜಾಗೃತಿ ಮೂಡಿಸಲು ವಿಶೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
https://www.suddikanaja.com/2020/11/15/diwali-vocal-for-local/
ರೋಗ ನಿರೋಧಕ ಶಕ್ತಿಯುಳ್ಳ ಅರಿಶಿನ ಮಿಶ್ರಿತವಾದ ಗೋಧಿ ಅಥವಾ ರಾಗಿ ಹಿಟ್ಟು ಸೇರಿಸಿ ಸಣ್ಣ ಸಣ್ಣ ಗಣೇಶನ ಪ್ರತಿಮೆ ತಯಾರಿಸಿ ಪೂಜಿಸುವುದರಿಂದ ಕೋವಿಡ್-19 ಅನ್ನು ಎದುರಿಸಲು ಸಂಕಲ್ಪ ಮಾಡುವಂತೆ ಕರೆ ನೀಡಲಾಗಿದೆ.
ವಿಶ್ವ ದಾಖಲೆಯ ಪ್ರಯತ್ನ
ಸಾರ್ವಜನಿಕರು ಇಂತಹ ಪುಟ್ಟ ಪುಟ್ಟ ಪ್ರತಿಮೆಗಳನ್ನು ತಯಾರಿಸಿ, ಪೂಜಿಸಿ ಮನೆಯ ಆವರಣದಲ್ಲಿ ವಿಸರ್ಜನೆ ಮಾಡಿ ಈ ಅಭಿಯಾನದಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ಅಭಿಯಾನದಲ್ಲಿ 10 ಲಕ್ಷ ಅರಿಶಿನ ಗಣೇಶ ತಯಾರಿಕಾ ಅಭಿಯಾನದ ಮೂಲಕ ವಿಶ್ವ ದಾಖಲೆಯ ಪ್ರಯತ್ನಕ್ಕೆ ಕೈಜೋಡಿಸುವಂತೆ ಮಂಡಳಿಯ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ.
ಈ ಜಾಲತಾಣಕ್ಕೆ ಅಪ್ ಲೋಡ್ ಮಾಡಿ
ಸಾರ್ವಜನಿಕರು ತಯಾರಿಸಿದ ಅರಿಶಿನ ಗಣೇಶ ವಿಗ್ರಹಗಳನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಾಲತಾಣ http://kspcb.karnataka.gov.in ರಲ್ಲಿ ಪರಿಸರ ಸ್ನೇಹಿ ಅರಿಶಿನ ಗಣೇಶ ವಿಗ್ರಹದ ಛಾಯಾಚಿತ್ರವನ್ನು ಅಪ್ ಲೋಡ್ ಮಾಡಿ ಆಕರ್ಷಕ ಬಹುಮಾನವನ್ನು ಗೆಲ್ಲಬಹುದಾಗಿದೆ ಎಂದು ತಿಳಿಸಿದ್ದಾರೆ.
https://www.suddikanaja.com/2021/01/09/administrative-approval-for-jog-development/