ಸುದ್ದಿ ಕಣಜ.ಕಾಂ | CITY | ACB RAID
ಶಿವಮೊಗ್ಗ: ಮಹಾನಗರ ಪಾಲಿಕೆಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸಿಬ್ಬಂದಿ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಈಗಲೂ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದ್ದು, ಯಾರು ಇದರ ಸುಳಿಯಲ್ಲಿ ಸಿಲುಕಲಿದ್ದಾರೆ ಎಂಬುವುದು ಕಾದು ನೋಡಬೇಕಿದೆ.
READ | ಜಗತ್ತಿನಾದ್ಯಂತ ಫೇಸ್ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಂ ಸರ್ವರ್ ಡೌನ್, ಬೆನ್ನಲ್ಲೇ ಭಾರೀ ಟ್ರೋಲ್
ಸಾರ್ವಜನಿಕರು ನೀಡಿದ ದೂರುಗಳನ್ನು ಆಧರಿಸಿ ಪಾಲಿಕೆಯ ಕಂದಾಯ ವಿಭಾಗದ ಮೇಲೆ ಸೋಮವಾರ ದಾಳಿ ನಡೆಸಲಾಗಿದೆ. ಬಲ್ಲ ಮೂಲಗಳ ಪ್ರಕಾರ, ಈ ವೇಳೆ ಸಾಕಷ್ಟು ದಾಖಲೆಗಳು ಸಿಕ್ಕಿದ್ದು, ಮಧ್ಯವರ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಬೆಳಗ್ಗೆಯಿಂದ ನಿರಂತರ ಪರಿಶೀಲನೆ ಮಾಡಲಾಗುತ್ತಿದೆ. ಎಸಿಬಿ ಡಿವೈಎಸ್ಪಿಗಳಾದ ಜಯಪ್ರಕಾಶ್, ಲೋಕೇಶ್ ಜಗಳೂರಪ್ಪ, ಇನ್ಸ್ ಪೆಕ್ಟರ್ ವಸಂತ್ ಕುಮಾರ್ ಸೇರಿ 6 ಇನ್ಸ್ ಪೆಕ್ಟರ್ ಮತ್ತು 20 ಸಿಬ್ಬಂದಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.