ಸುದ್ದಿ ಕಣಜ.ಕಾಂ | KARNATAKA | JOB JUNCTION
ಬೆಂಗಳೂರು: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕೆಪಿಟಿಸಿಎಲ್ (KPTCL) ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಉದ್ಯೋಗ ಆಕಾಂಕ್ಷಿಗಳ ಬಹು ವರ್ಷಗಳ ನಿರೀಕ್ಷೆಈಗ ಈಡೇರುತ್ತಿದೆ.
2019ರ ಫೆಬ್ರವರಿಯಲ್ಲಿ ಕೆಪಿಟಿಸಿಎಲ್ ನ 1,899 ಕಿರಿಯ ಪವರ್ ಮ್ಯಾನ್ ಗಳ ನೇಮಕಕ್ಕೆ ಅರ್ಜಿಗಳನ್ನು ಆಹ್ವಾನಿಸಿತ್ತು. ಆದರೆ, ನಾನಾ ಕಾರಣಗಳಿಂದಾಗಿ ನೇಮಕಾತಿ ಪ್ರಕ್ರಿಯೆ ನನೆಗುದಿಗೆ ಬಿದ್ದಿತ್ತು. ಈ ಉದ್ಯೋಗದ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳು ಹಲವು ಸಲ ಸರ್ಕಾರದ ಗಮನವನ್ನೂ ಸೆಳೆದಿದ್ದರು. ನಿರೀಕ್ಷಿತ ಲಾಭವಾಗಿರಲಿಲ್ಲ.
READ | ಎನ್.ಪಿ.ಸಿ.ಐ.ಎಲ್.ನಲ್ಲಿ ಭರ್ಜರಿ ಉದ್ಯೋಗ ಅವಕಾಶ, ಅರ್ಜಿ ಸಲ್ಲಿಕೆಗೆ ದಿನಗಣನೆ ಶುರು
ಆದರೆ, ರಾಜ್ಯ ಸರ್ಕಾರ ಈಗ ನೇಮಕಾತಿಗೆ ಮುಂದಾಗಿದೆ. ಮೊದಲ ಹಂತದಲ್ಲಿ ಬೆಂಗಳೂರಿನ ಕೆಪಿಟಿಸಿಎಲ್ ಸಭಾಂಗಣದಲ್ಲಿ ಸೋಮವಾರ ಸಾಂಕೇತಿಕವಾಗಿ21 ಜನರಿಗೆ ನೇಮಕಾತಿ ಆದೇಶ ಪತ್ರ ವಿತರಿಸಲಾಗಿದೆ.
ಶೀಘ್ರವೇ ಉಳಿದವರಿಗೂ ಅಪಾಯಿಂಟ್ಮೆಂಟ್ ಲೆಟರ್
ಈ ಸಂದರ್ಭದಲ್ಲಿ ಮಾತನಾಡಿದ ಇಂಧನ ಸಚಿವ ಸುನೀಲ್ ಕುಮಾರ್, ಸಾಂಕೇತಿಕವಾಗಿ 21 ಅಭ್ಯರ್ಥಿಗಳಿಗೆ ಅಪಾಯಿಂಟ್ಮೆಂಟ್ ಲೆಟರ್ ನೀಡಲಾಗಿದೆ. ಇನ್ನೂ ಬಾಕಿಉಳಿಸಿರುವ 1,878 ಅಭ್ಯರ್ಥಿಗಳಿಗೂ ನೇಮಕಾತಿ ಆದೇಶ ವಿತರಿಸಲಾಗುವುದು ಎಂದರು.
ಬಿಜೆಪಿ ಅವಧಿಯಲ್ಲಿ ನೇಮಕಾತಿ ಮಾಡಲಾಗುತಿದ್ದು, ಮುಂದಿನ ದಿನಗಳಲ್ಲಿ ಕೆಪಿಡಿಸಿಎಲ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೂ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ್ ನಾಯಕ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕಿ ಡಾ.ಎಂ. ಮಂಜುಳಾ ಉಪಸ್ಥಿತರಿದ್ದರು.
https://www.suddikanaja.com/2020/11/21/kptcl-recruitment-cancel/