ಸುದ್ದಿ ಕಣಜ.ಕಾಂ | TALUK | CRIME NEWS
ತೀರ್ಥಹಳ್ಳಿ: ತಾಲೂಕಿನ ಹಣಗೆರೆ ಗ್ರಾಮದ ಮನೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡಿ ತಲೆಮರೆಸಿಕೊಂಡಿದ್ದ ಐದು ಜನ ಆರೋಪಿಗಳನ್ನು ಬರೋಬ್ಬರಿ ಎರಡು ತಿಂಗಳುಗಳ ಬಳಿಕ ಶುಕ್ರವಾರ ಬಂಧಿಸಲಾಗಿದೆ.
ಬಂಧಿತರಲ್ಲಿ ಹೊರ ಜಿಲ್ಲೆಯವರೂ ಇದ್ದಾರೆ
ಕಡೂರು ನಿವಾಸಿ ತಿಮ್ಮಣ್ಣ (61), ಸಾಗರ ತಾಲೂಕಿನ ರಾಮನಗರದ ಅಪ್ಸರ (38), ಬೊಮ್ಮನಕಟ್ಟೆಯ ನರಸಿಂಹ (45), ಕಿರಣ್ (26), ನ್ಯೂ ಮಂಡ್ಲಿದ ಸತ್ತಾರ್ (50) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಅಂದಾಜು ಮೌಲ್ಯ 8.17 ಲಕ್ಷ ರೂಪಾಯಿ ಮೌಲ್ಯದ 200 ಗ್ರಾಂ ಬಂಗಾರದ ಮತ್ತು 40 ಗ್ರಾಂ ಬೆಳ್ಳಿಯ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಹಣಗೆರೆ ಗ್ರಾಮದ ವಾಸಿಯೊಬ್ಬರು ತಮ್ಮ ವಾಸದ ಮನೆಗೆ ಬೀಗ ಹಾಕಿಕೊಂಡು ಪುರದಾಳಿಗೆ ಹೋಗಿದ್ದಾಗ ಯಾರೋ ಕಳ್ಳರು ಮನೆಯ ಬೀಗವನ್ನು ಮುರಿದು ಒಳಗೆ ಹೋಗಿ ಬೀರುವಿನಲ್ಲಿದ್ದ ನಗದು ಹಣ ಬಂಗಾರ ಮತ್ತು ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ಮಾಳೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಮಾಳೂರು ಸಿಪಿಐ, ಪಿಎಸ್.ಐ ಮತ್ತು ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
https://www.suddikanaja.com/2021/06/22/five-accused-arrested-in-theft-case/