ಸುದ್ದಿ ಕಣಜ.ಕಾಂ | TALUK | EDUCATION CORNER
ಸಾಗರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸ ವೇಳಾಪಟ್ಟಿಯನ್ನು ಅಳವಡಿಸಿದ್ದು ಅದನ್ನು ರದ್ದುಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ ಮಾಡಲಾಯಿತು.
ಕಾಲೇಜು ವೇಳಾಪಟ್ಟಿ ಬದಲಾವಣೆಯನ್ನು ವಿದ್ಯಾರ್ಥಿಗಳ ಜೊತೆಗೆ ಸಮಾಲೋಚನೆ ನಡೆಸಿ ನಂತರ ತಿರ್ಮಾನ ಕೈಗೊಳ್ಳಬೇಕಿತ್ತು. ಈಗಿರುವ ವೇಳಾಪಟ್ಟಿಯಿಂದ ಹಲವಾರು ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ತರಗತಿಗೆ ಹಾಜರಾಗಲು ಅನಾನುಕೂಲ ಆಗುತ್ತಿದೆ. ಆದ್ದರಿಂದ ಕೊಡಲೇ ಶಾಸಕ ಹರತಾಳು ಹಾಲಪ್ಪ ಮಧ್ಯ ಪ್ರವೇಶ ಮಾಡಿ ವೇಳಾಪಟ್ಟಿ ಬದಲಾವಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕಾಲೇಜಿನಲ್ಲಿ ಅಳವಡಿಸಿರುವ ಹೊಸ ವೇಳಾಪಟ್ಟಿಯಂತೆ ಮಧ್ಯಾಹ್ನ 12 ರಿಂದ ಸಂಜೆ 5 ಗಂಟೆಯವರೆಗೆ ತರಗತಿ ನಡೆಸಲಾಗುವುದು. ಹಳೇ ವೇಳಾಪಟ್ಟಿ ಬೆಳಗ್ಗೆ 10ರಿಂದ ಮಧ್ಯಾಹ್ನ 3ಗಂಟೆಯವರೆಗೆ ಇತ್ತು.ಆದರೆ, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ಮಾಡದೇ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಇದರಿಂದ ಭಾರಿ ಸಮಸ್ಯೆ ಆಗಲಿದೆ. ಆದ್ದರಿಂದ, ವೇಳಾಪಟ್ಟಿ ಬದಲಿಸುವವರೆಗೆ ತರಗತಿಗಳಿಗೆ ಕುಳಿತುಕೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಭರವಸೆ ನಂತರ ಪ್ರತಿಭಟನೆ ವಾಪಸ್
ಸಾಗರದ ಉಪ ವಿಭಾಗ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಅಹವಾಲು ಸ್ವೀಕರಿಸಿದರು. ಇನ್ನೂ 2 ತಿಂಗಳಲ್ಲಿ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು. ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ಸಿ.ಎಂ. ಚಿನ್ಮಯ್, ಅವಿ ಭಂಡಾರಿ, ಸಚಿನ್, ಸೈಯದ್, ಆದಿತ್ಯ, ವರುಣ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿವಮೊಗ್ಗ ವಿಮಾನ ನಿಲ್ದಾಣ ಬ್ಲೂ ಪ್ರಿಂಟ್ ಬಗ್ಗೆ ಅಪಸ್ವರ, ವಿನ್ಯಾಸ ಬದಲಿಸದಿದ್ದರೆ ಕೋರ್ಟ್ ಮೊರೆಯ ಎಚ್ಚರಿಕೆ