ಸುದ್ದಿ ಕಣಜ.ಕಾಂ | DISTRICT | MLC ELECTION
ಶಿವಮೊಗ್ಗ: ವಿಧಾನ ಪರಿಷತ್ತಿನ ದೈವಾರ್ಷಿಕ ಚುನಾವಣೆ ಮತದಾನವು ಡಿಸೆಂಬರ್ 10ರಂದು ನಡೆಯಲಿದ್ದು, ಜಿಲ್ಲೆಯಲ್ಲಿ ನಿಷೇಧಾಜ್ಞೆ ಹೇರಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಡಿಸೆಂಬರ್ 7ರಿಂದ ಅನ್ವಯವಾಗುವಂತೆ ಡಿ.10ರ ಸಂಜೆ 4 ಗಂಟೆಯವರೆಗೆ ಸಿ.ಆರ್.ಪಿ.ಸಿ.ಕಲಂ 144ರನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ.
ಏನೇನು ನಿಷೇಧ?
ಮತಗಟ್ಟೆ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದು, ನಿಷೇಧಿತ 100 ಮೀಟರ್ ವ್ಯಾಪ್ತಿಯಲ್ಲಿ ಮತದಾರರು ಮತ್ತು ಸಾರ್ವಜನಿಕರು ಚುನಾವಣಾ ಪ್ರಚಾರ ಮಾಡುವುದನ್ನು ನಿಷೇಧಿಸಲಾಗಿದೆ.
READ | 1 ತಿಂಗಳಲ್ಲಿ 2 ಕಾಡಾನೆ ಸಾವು, ತ್ಯಾಗದಬಾಗಿ ಅರಣ್ಯದಲ್ಲಿ ಮೃತಪಟ್ಟ ಆನೆ ದಂತದ ತೂಕ ಬರೋಬ್ಬರಿ 41 ಕೆಜಿ
ಈ ನಿಷೇಧಿತ ಪ್ರದೇಶಗಳಲ್ಲಿ ಮತದಾನಕ್ಕೆ ಬಾಧಕವಾಗುವಂತಹ ಯಾವುದೇ ಕೃತ್ಯ, ಚಟುವಟಿಕೆ ನಿಷೇಧಿಸಿದೆ. ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಮತ್ತು ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.
ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಚೂರಿ, ದೊಣ್ಣೆ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ನಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ.
ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ. ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು, ಪದ ಹಾಡುವುದು, ಚೇಷ್ಟೆ, ಸಂಜ್ಞೆಗಳನ್ನು ಉಪಯೋಗಿಸುವುದು, ಚಿತ್ರಗಳ ಮೂಲಕ ಪ್ರದರ್ಶನ, ಪ್ರಸಾರ ಮಾಡುವುದು, ಪತ್ರಿಕಾ ಪ್ರಕಟಣೆ ಪತ್ರಿಕೆಗಳ, ಇತರ ಯಾವುದೇ ವಸ್ತುಗಳ ಪ್ರದರ್ಶನ ಭಿತ್ತಿಪತ್ರಗಳನ್ನು ಅಂಟಿಸುವುದರಿಂದ ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆಗೆ ಅಪಾಯವಾಗುವ ಯಾವುದೇ ಅಪರಾಧ ಎಸಗುವಂತಹ ಕ್ರಮಗಳನ್ನು ನಿಷೇಧಿಸಿದೆ.
ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸ್ಫೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ. ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವುದು.
READ | ಕಸಾಯಿಖಾನೆಗೆ ಬೀಗ, ಮನೆಯಲ್ಲೇ ಗೋ ಮಾಂಸ ಮಾರಾಟ! ಪೊಲೀಸರಿಂದ ದಾಳಿ, ಸಿಕ್ಕ ಮಾಂಸವೆಷ್ಟು?
ಮತಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಭೇಟಿ ನೀಡುವುದಕ್ಕೆ ನಿರ್ಬಂಧ ಇರುವುದಿಲ್ಲ. ಮತದಾನ ಕೇಂದ್ರದ ಪರಿಮಿತಿ 1 ಕಿ.ಮೀ. ವ್ಯಾಪ್ತಿಯಲ್ಲಿ ಸಂತೆ ಮತ್ತು ಎಲ್ಲ ತರಹದ ಜಾತ್ರೆಗಳನ್ನು ಹಾಗೂ ಭಾರಿ ಪ್ರಮಾಣದಲ್ಲಿ ಜನ ಗುಂಪುಗಾರಿಕೆ, ಸಂಚರಿಸುವುದನ್ನು ನಿಷೇಧಿಸಿದೆ. ಈ ನಿಷೇದಾಜ್ಞೆ ಸರ್ಕಾರಿ ಅಧಿಕಾರಿಗಳಿಗೆ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.
ನಿಷೇದಾಜ್ಞೆಯು ಸದುದ್ದೇಶದ ಕಾರ್ಯಗಳಾದ ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ದೇವಸ್ಥಾನ, ಚರ್ಚ್, ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ ಹಾಗೂ ಇನ್ನಿತರ ಸಮಾರಂಭಗಳನ್ನು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಹಾಗೂ ತುರ್ತು ಕಾರ್ಯಾಚರಣೆ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ.
https://www.suddikanaja.com/2021/10/30/to-avoid-atm-fraud-sbi-interduce-new-method/