ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ತಾಲೂಕಿನ ತುಮರಿ ಭಾಗದಲ್ಲಿ ಆಂಬ್ಯುಲೆನ್ಸ್ ಸಿಗದೇ ಇಬ್ಬರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬುಧವಾರ ನಡೆದಿದೆ. ಇದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧವೂ ವ್ಯಕ್ತವಾಗುತ್ತಿದೆ.
ಗರ್ಭಿಣಿ ಚೈತ್ರಾ ಅವರಿಗೆ ಬುಧವಾರ ಸಂಜೆ 6 ಗಂಟೆಯ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಆಂಬ್ಯುಲೆನ್ಸ್ ಗೆ ಕರೆ ಮಾಡಲಾಗಿದೆ. ಆದರೆ, ರಾತ್ರಿಯಾದರೂ ಬಂದಿಲ್ಲ. ಹೀಗಾಗಿ, ಅವರನ್ನು ಖಾಸಗಿ ವಾಹನದಲ್ಲಿ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಹೆರಿಗೆಯೂ ಆಗಿದೆ. ಆದರೆ, ಹೆಚ್ಚುವರಿ ಚಿಕಿತ್ಸೆಯ ಅಗತ್ಯವಿದ್ದ ಕಾರಣಕ್ಕೆ ಅವರನ್ನು ಸಾಗರ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಲಾಗಿದೆ. ನಡುರಾತ್ರಿಯೇ ಲಾಂಚ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ನವಜಾತ ಶಿಶು ಗುರುವಾರ ಬೆಳಗ್ಗೆ ಮೃತಪಟ್ಟಿದೆ.
https://www.suddikanaja.com/2021/09/25/ambulance-service-collapsed/