ಸುದ್ದಿ ಕಣಜ.ಕಾಂ | DISTRICT | HEALTH NEWS
ಶಿವಮೊಗ್ಗ: ರಾಜ್ಯದಲ್ಲಿ ಪ್ರಸ್ತುತ ಲಾಕ್ ಡೌನ್ ಹೇರುವ ಸ್ಥಿತಿ ಇಲ್ಲ. ಒಂದುವೇಳೆ, ಕೊರೊನಾ ಸೋಂಕಿನಲ್ಲಿ ಏರಿಕೆ ಕಂಡುಬಂದು, ಪರಿಸ್ಥಿತಿ ಕೈಮೀರಿದರೆ ಈ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಟಾಪ್ 4 ಪಾಯಿಂಟ್ಸ್ ಇಲ್ಲಿವೆ.
- ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು. ರಾಜ್ಯದ 6 ಸಾವಿರ ಪಂಚಾಯಿತಿಗಳಲ್ಲಿ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುವುದು. ಟಾಸ್ಕ್ ಫೋರ್ಸ್ ನಲ್ಲಿ ಗಾಪಂ ಮತ್ತು ಇತರೆ ಸರ್ಕಾರಿ ಅಧಿಕಾರಿಗಳು ಇರಲಿದ್ದಾರೆ.
ಏನಿದರ ಜವಾಬ್ದಾರಿ | ಗ್ರಾಮೀಣ ಮಟ್ಟದಲ್ಲಿ ಕೋವಿಡ್ ಪರಿಸ್ಥಿತಿ ಅವಲೋಕನ, ಆಸ್ಪತ್ರೆ ದಾಖಲಾತಿ, ಸೋಂಕಿತರ ಕ್ವಾರಂಟೈನ್, ಆರೋಗ್ಯಾಧಿಕಾರಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಕ್ಕೆ ಪವರ್ - ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಲು ಮನಸ್ಸಾಗುತ್ತಿಲ್ಲ. ಅದಕ್ಕಾಗಿ, ಎಫ್.ಐ.ಆರ್. ದಾಖಲಾದರೂ ಸುಮ್ಮನಿದ್ದೇವೆ.
- ಶಿವಮೊಗ್ಗದಲ್ಲಿ ಕೆಲವು ಶಾಲೆ ಮತ್ತು ಕಚೇರಿಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆದರೆ, ಶಾಲೆಗಳನ್ನು ಬಂದ್ ಮಾಡುವುದು ಅಥವಾ ಅದನ್ನು ಮುಂದುವರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಅವರೇ ಕ್ರಮಕೈಗೊಳ್ಳುವರು.
- 60 ಮಕ್ಕಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಕಾರಣಕ್ಕಾ ಎಲ್ಲ ಶಾಲೆಗಳನ್ನು ಬಂದ್ ಮಾಡುವುದು ಸರಿಯಲ್ಲ. ಈ ಎಲ್ಲ ವಿಚಾರಗಳ ಕುರಿತು ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಲಿದೆ.
Weekend curfew ಗೆ ಸಚಿವ ಈಶ್ವರಪ್ಪ ವಿರೋಧ, ಅವರು ನೀಡಿದ ಟಾಪ್ 3 ಕಾರಣ ಇಲ್ಲಿವೆ