ಸುದ್ದಿ ಕಣಜ.ಕಾಂ | DISTRICT | SAMVADA
ಶಿವಮೊಗ್ಗ: ಜಿಲ್ಲೆಯಲ್ಲಿ ಗಾಂಜಾ ಹಾವಳಿ ಹೆಚ್ಚಿದೆ. ಅದನ್ನು ನಿಯಂತ್ರಿಸುವುದಕ್ಕೆ ಪೊಲೀಸ್ ಇಲಾಖೆ ಹಲವು ಕ್ರಮಕೈಗೊಂಡಿದೆ. ಇದುವರೆಗೆ 72 ಜನರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಕರೆದಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಗಾಂಜಾ, ಮತ್ತು ಮಾದಕ ವಸ್ತುಗಳ ಸೇವನೆ ನಿದ್ದೆಗಿಡಿಸಿದೆ. ಯುವ ಸಮೂಹದಲ್ಲಿ ಮಾದಕ ವಸ್ತುಗಳ ಸೇವನೆ ದೊಡ್ಡ ಪಿಡುಗಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
READ | ಶೀಘ್ರವೇ ಹೊರ ಬೀಳಲಿದೆ ಅಡಿಕೆ ಸಂಶೋಧನಾ ಪೂರ್ಣ ವರದಿ, ಕ್ಯಾನ್ಸರ್ ಕಾರಕ ಹಣೆಪಟ್ಟಿ ಅಳಿಸಲು ಯತ್ನ
72 ಜನ ಅರೆಸ್ಟ್
ಶಿವಮೊಗ್ಗಕ್ಕೆ ಆಂಧ್ರಪ್ರದೇಶದಿಂದ ಗಾಂಜಾ ಸರಬರಾಜು ಮಾಡಲಾಗುತಿತ್ತು. ಇದುವರೆಗೆ, ಒಟ್ಟು 200 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಸೇವನೆ ಮಾಡುವವರ ವಿರುದ್ಧ 160 ಪ್ರಕರಣಗಳನ್ನು ದಾಖಲಿಸಿ, 72 ಜನರನ್ನು ಬಂಧಿಸಲಾಗಿದೆ ಎಂದರು.
ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವೆ
ಕೇವಲ ಹೆಸರಿಗಷ್ಟೇ ಸಚಿವನಾಗುವುದು ನನಗೆ ಇಷ್ಟವಿಲ್ಲ. ಅದಕ್ಕಾಗಿಯೇ ಪ್ರಾಮಾಣಿಕ ಕೆಲಸ ಮಾಡುತ್ತಿದ್ದೇನೆ. ಪೆÇಲೀಸ್ ಇಲಾಖೆಯನ್ನು ಜನಸ್ನೇಹಿಗೊಳಿಸಲು ಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಕಾರ್ಯದರ್ಶಿ ನಾಗರಾಜ್ ನೇರಿಗೆ, ಮಾಧ್ಯಮ ಅಕಾಡೆಮಿ ಸದಸ್ಯ ಗೋಪಾಲ್ ಯಡಗೆರೆ ಉಪಸ್ಥಿತರಿದ್ದರು.
https://www.suddikanaja.com/2021/09/18/cannabis-testing-kits-shortly-starts-in-shivamogga/