ಸುದ್ದಿ ಕಣಜ.ಕಾಂ | KARNATAKA | POLITICAL NEWS
ಶಿವಮೊಗ್ಗ: ಹಿಜಾಬ್ ವಿಚಾರವನ್ನೇ ಮುಂದಿಟ್ಟುಕೊಂಡು ಕೆಲವು ಮತೀಯ ಸಂಘಟನೆಗಳು ಮಕ್ಕಳ ಮನಸ್ಸುಗಳಲ್ಲಿ ವಿಷ ಬೀಜ ಬಿತ್ತು ಕೆಲಸ ಮಾಡುತ್ತಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು.
READ | ಶಿವಮೊಗ್ಗದಲ್ಲಿ ಆರಂಭವಾಗಲಿದೆ ವಿಜ್ಞಾನ ಕೇಂದ್ರ, ತಜ್ಞರ ತಂಡ ಭೇಟಿ, ಕೇಂದ್ರದಲ್ಲಿ ಏನೇನಿರಲಿದೆ
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಂತಿಗೆ ಭಂಗ ತರುವ ಕೆಲಸವನ್ನು ಮಾಡಲಾಗುತ್ತಿದೆ. ಇದರ ಬೇರು ಬಹಳ ಆಳವಾಗಿವೆ ಎಂದು ಹೇಳಿದರು.
ಕರ್ನಾಟಕ ದೇಶದಲ್ಲೇ ಶಾಂತಿ ಸುವ್ಯವಸ್ಥೆಗೆ ಹೆಸರುವಾಸಿಯಾಗಿದೆ. ಆದದರೆ, ಕೆಲವರು ಹಿಜಾಬ್ ಗಾಗಿ ಇದಕ್ಕೆ ಬೆಂಕಿ ಇಡುತ್ತಿದ್ದಾರೆ. ರಾಜ್ಯಕ್ಕೆ ಕಪ್ಪು ಚುಕ್ಕೆ ಇಡಲಾಗುತ್ತಿದೆ. ಹೀಗಾಗಿ, ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.
ವಿಪಕ್ಷದಿಂದ ಅಧಿವೇಶನದ ಕಾಲವೂ ಹಾಳು
ಹಿಜಾಬ್ ಸೇರಿದಂತೆ ವಿವಿಧ ವಿಚಾರಗಳನ್ನು ಇಟ್ಟುಕೊಂಡು ವಿಪಕ್ಷದವರು ಅಧಿವೇಶನದ ಸಮಯವನ್ನು ಹಾಳು ಮಾಡಲಾಗುತ್ತಿದೆ. ಜನರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸುವುದನ್ನು ಬಿಟ್ಟು ಕಾಲಹರಣ ಮಾಡುತ್ತಿರುವುದು ಸರಿಯಲ್ಲ ಎಂದರು.
READ | ಕಾರಣಗಿರಿ ಸೇತುವೆ ಕಾಮಗಾರಿಗೆ ರಾಜ್ಯ ಬಜೆಟ್ನಲ್ಲಿ 18 ಕೋಟಿ ರೂ. ಅನುದಾನಕ್ಕೆ ಗ್ರೀನ್ ಸಿಗ್ನಲ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸುಳ್ಳು ಪ್ರಚಾರದ ಮೂಲಕ ವಿಧಾನಸಭೆಯ ಕಲಾಪ ಹಾಳು ಮಾಡುತ್ತಿದ್ದಾರೆ. ಲಾಲ್ ಚೌಕ್ನಲ್ಲಿ ತ್ರಿವರ್ಣ ಧ್ವಜ ಹಾರಿಸಿ ದೇಶ ಪ್ರೇಮ ಮೆರೆದ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ರಾಜಕಾರಣಕ್ಕೆ ಬೇರೆಯ ವಿಚಾರಗಳು ಇಲ್ಲದೇ ಇರುವುದರಿಂದ ಕಾಂಗ್ರೆಸ್ ನವರು ಇಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿಯ ಮುಖಂಡರಾದ ಎಸ್.ದತ್ತಾತ್ರಿ, ಎಸ್.ಎಸ್. ಜ್ಯೋತಿಪ್ರಕಾಶ್, ಎನ್.ಜೆ. ನಾಗರಾಜ್, ಸುನೀತಾ ಅಣ್ಣಪ್ಪ, ಕೆ.ವಿ. ಅಣ್ಣಪ್ಪ, ಎನ್.ಕೆ. ಜಗದೀಶ್ ಉಪಸ್ಥಿತರಿದ್ದರು.
https://www.suddikanaja.com/2021/11/11/weaning-off-elephant-calf-from-mother-at-skarebailu-elephant-camp-shivamogga/