ಸುದ್ದಿ ಕಣಜ.ಕಾಂ | TALUK | CRIME NEWS
ಹೊಸನಗರ: ತಾಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ 1 ಹೆಚ್ಚುವರಿ ಪ್ರಭಾರ ಪಿಡಿಒ ಮುರುಗೇಶ್ ಅವರು ಎಸಿಬಿ (anti corruption bureau) ಬಲೆಗೆ ಬಿದ್ದಿದ್ದಾರೆ.
READ | ಶಿವಮೊಗ್ಗ ಜಿಲ್ಲೆಯಲ್ಲಿ ‘ಹುಂಚ’ ತಂಬಾಕು ಮುಕ್ತ ಗ್ರಾಮ ಘೋಷಣೆ
ಲಂಚ ಪಡೆಯುತ್ತಿದ್ದಾಗ ನಡೀತು ಕಾರ್ಯಾಚರಣೆ
ಭೂ ಪರಿವರ್ತನೆಗೊಂಡ 10 ಗುಂಟೆ ಜಾಗದ ನಿವೇಶನಗಳಿಗೆ ಯೋಜನಾ ಪರವಾನಗಿ ಮತ್ತು ಮ್ಯೂಟೇಶನ್ ಗಾಗಿ 1 ಲಕ್ಷಕ್ಕಾಗಿ ಮುರುಗೇಶ್ ಅವರು ಬೇಡಿಕೆ ಇಟ್ಟಿದ್ದರು. ಮೊದಲ ಕಂತಿನಲ್ಲಿ 20,000 ರೂಪಾಯಿ ಲಂಚ ಪಡೆದಿದ್ದರು. ಬುಧವಾರ ಮಧ್ಯಾಹ್ನ ಎರಡನೇ ಕಂತಿನ 30 ಸಾವಿರ ರೂ. ಸ್ವೀಕರಿಸುತ್ತಿದ್ದಾಗ ಶಿವಮೊಗ್ಗ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಪೂರ್ವ ವಲಯ ಪೊಲೀಸ್ ಅಧೀಕ್ಷಕ ಜಯಪ್ರಕಾಶ್ ಮಾರ್ಗದರ್ಶನದಲ್ಲಿ ಎಸಿಬಿ ಡಿವೈಎಸ್ಪಿ ಜೆ.ಲೋಕೇಶ್ ನೇತೃತ್ವದಲ್ಲಿ ಇನ್ಸ್’ಪೆಕ್ಟರ್ ಇಮ್ರಾನ್ ಬೇಗ್, ಸಿಬ್ಬಂದಿ ವಸಂತ್, ನಾಗರಾಜ್, ರಘುನಾಯ್ಕ್ ಅವರು ಕಾರ್ಯಾಚರಣೆ ನಡೆಸಿದ್ದಾರೆ.